ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.
ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel