ಸುಳ್ಯ: ಸಂಸದ ನಳಿನ್ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…