Advertisement
ಸುದ್ದಿಗಳು

ಬಳ್ಪದಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ-ಅಪಪ್ರಚಾರ ರಾಜಕೀಯ ಪ್ರೇರಿತ – ವೆಂಕಟ್ ವಳಲಂಬೆ

Share

ಸುಳ್ಯ: ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement

ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

23 mins ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

8 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

10 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago