Advertisement
ಸುದ್ದಿಗಳು

ಬಳ್ಪದಲ್ಲಿ ಸಾಕಷ್ಟು ಅಭಿವೃದ್ಧಿ ನಡೆದಿದೆ-ಅಪಪ್ರಚಾರ ರಾಜಕೀಯ ಪ್ರೇರಿತ – ವೆಂಕಟ್ ವಳಲಂಬೆ

Share

ಸುಳ್ಯ: ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.

ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago