ಸುಳ್ಯ: ಸಂಸದ ನಳಿನ್ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…