ಸುಳ್ಯ: ಸಂಸದ ನಳಿನ್ಕುಮಾರ್ ಕಟೀಲ್ ಅವರು ಆದರ್ಶ ಗ್ರಾಮವಾಗಿ ಆಯ್ಕೆ ಮಾಡಿದ ಬಳ್ಪದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ. ಬಳ್ಪದಲ್ಲಿ ಅಭಿವೃದ್ಧಿ ನಡೆದಿಲ್ಲ ಎಂಬುದು ರಾಜಕೀಯ ಪ್ರೇರಿತ ಅಪಪ್ರಚಾರ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ.
ಆದರ್ಶ ಗ್ರಾಮವಾಗಿ ಅಯ್ಕೆಯಾದ ಮೇಲೆ ಬೇರೆ ಮೂಲಗಳಿಂದ ಬಳ್ಪಕ್ಕೆ ಅನುದಾನಗಳು ಹರಿದು ಬಂದಿದೆ. ಹಲವು ರಸ್ತೆಗಳು ಅಭಿವೃದ್ಧಿಯಾಗಿದೆ. ಕೆಲವೊಂದು ಸಮಸ್ಯೆಗಳು ಇರಬಹುದು, ಒಂದೊಂದು ಘಟನೆಯನ್ನು ಮುಂದಿರಿಸಿ ಇಲ್ಲಿ ಅಭಿವೃದ್ಧಿಯೇ ನಡೆದಿಲ್ಲ ಎಂಬ ಅಪಪ್ರಚಾರ ಸರಿಯಲ್ಲ. ಗ್ರಾಮದಲ್ಲಿ ಇನ್ನು ಅಭಿವೃದ್ಧಿಗೆ ಬಾಕಿ ಉಳಿದಿರುವ ಎಲ್ಲಾ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಗ್ರಾಮದಲ್ಲಿ ಶಾಲೆ, ಅಂಗನವಾಡಿ, ರಸ್ತೆ , ಬ್ಯಾಂಕಿಂಗ್ ವ್ಯವಸ್ಥೆ, ಜನರಿಗೆ ವಿವಿಧ ಮಾಹಿತಿ ಶಿಬಿರಗಳು, ಹೈನುಗಾರಿಕೆಗೆ ಆದ್ಯತೆ, ಹೊಗೆರಹಿತ ಮನೆ ಕಡೆಗೆ ಆದ್ಯತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ನಡೆದಿದೆ. ಇತಿಹಾಸ ಪ್ರಸಿದ್ಧ ಬೋಗಾಯನ ಕೆರೆ ಅಭಿವೃದ್ಧಿಗೂ 1.8 ಕೋಟಿ ರೂ ಮಂಜೂರಾಗಿದೆ. ಅಭಿವೃದ್ಧಿ ಇಲ್ಲಿ ನಿರಂತರವಾಗಿ ನಡೆಯಲಿದೆ ಎಂದು ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…