ಬಳ್ಪ: ಸುಳ್ಯ ತಾಲೂಕಿನ ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.
ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.