ಬಳ್ಪ: ಸುಳ್ಯ ತಾಲೂಕಿನ ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.
ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…