ಬಳ್ಪ: ಸುಳ್ಯ ತಾಲೂಕಿನ ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.
ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…