ಬಳ್ಪ: ಸುಳ್ಯ ತಾಲೂಕಿನ ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.
ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ ಸಂಚರಿಸುತ್ತಿದ್ದ ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…