ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.
ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…