ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.
ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…