ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.
ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…