ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.
ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…