ಬಳ್ಪ: ಬಳ್ಪ ಗ್ರಾಮದ ಕಲ್ಲೇರಿಯ ಸುಬ್ರಹ್ಮಣ್ಯ ಭಟ್ ಅವರ ಹಟ್ಟಿಗೆ ದಾಳಿ ಮಾಡಿದ ಚಿರತೆ ಕರುವನ್ನು ತಿಂದ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ಬಳ್ಪ ಗ್ರಾಮದ ಎಣ್ಣೆಮಜಲು, ಕಲ್ಲೇರಿ, ಆಲ್ಕಬೆ, ತುಂಬತ್ತಾಜೆ ಪ್ರದೇಶದಲ್ಲಿ ಚಿರತೆ ಓಡಾಟ ಇತ್ತು. ಕೆಲವು ಮನೆಗಳಿಂದ ನಾಯಿಯನ್ನು ಈಗಾಗಲೇ ಕೊಂದು ತಿಂದಿದೆ. ಕೆಲವು ಕಡೆ ನಾಯಿ ಬೊಬ್ಬೆ ಕೇಳಿ ಮನೆಯವರು ಬಂದಾಗ ಚಿರತೆ ಓಡಿದ ಬಗ್ಗೆಯೂ ಜನರು ಮಾಹಿತಿ ನೀಡುತ್ತಾರೆ.
ಮಂಗಳವಾರ ರಾತ್ರಿ ಬಳ್ಪದ ಮೆಕ್ಯಾನಿಕ್ ಒಬ್ಬರು ರಾತ್ರಿ ಮನೆಗೆ ತೆರಳುವಾಗ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ಕಲ್ಲೇರಿಯಲ್ಲಿ ಕರುವನ್ನು ಕೊಂದು ತಿಂದಿದೆ. ಬಳ್ಪ ಗ್ರಾಮದಲ್ಲು ತೊಂದರೆ ನೀಡುತ್ತಿರುವ ಚಿರತೆ ನ್ನು ಹಿಡಿಯಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು
ಚಿರತೆ ದಾಳಿ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರಾದ ರಮಾನಂದ ಎಣ್ಣೆಮಜಲು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…