Advertisement
ಸುದ್ದಿಗಳು

ಬಳ್ಪದ ಬೋಗಾಯನಕೆರೆಯಲ್ಲಿ ಕೆಸರು ಇದೆ ಮಾರಾಯ್ರೆ….!

Share

ಬಳ್ಪ: ಬಳ್ಪದ ಬೋಗಾಯನ ಕೆರೆ ಸಂಪೂರ್ಣ ಬತ್ತಿಹೋಗಿದೆ. ಕೆರೆಯನ್ನು ಹೂಳೆತ್ತಿ ಪುನಶ್ಚೇತನಗೊಳಿಸಲು ಇದು ಸಕಾಲವಾಗಿದೆ. ಸುಮಾರು 1.5 ಎಕ್ರೆ ವಿಸ್ತೀರ್ಣದ ಕೆರೆಯಲ್ಲಿ ಸಂಪೂರ್ಣ ಹೋಳೇ ತುಂಬಿಕೊಂಡ ಕಾರಣ ನೀರಿಲ್ಲದೆ ಕೆರೆ ಬರಿದಾಗಿದೆ.

ಸಂಸದರ ಆದರ್ಶಗ್ರಾಮ ಯೋಜನೆಯಲ್ಲಿ ಅಭಿವೃದ್ಧಿ ಕಾಣುತ್ತಿರುವ ಬಳ್ಪದಲ್ಲಿನ ಬೋಗಾಯನ ಕೆರೆಗೆ ಐತಿಹಾಸಿಕ ಮಹತ್ವವೂ ಇದೆ. ಕದಂಬರ ಕಾಲದಲ್ಲಿ ಕಟ್ಟಿಸಲಾದ ಕೆರೆ ಎಂದು ಇತಿಹಾಸಗಳಿಂದ ತಿಳಿಯುತ್ತದೆ. ಈ ಕೆರೆ ಹಿಂದೆ ಹಲವು ಪ್ರದೇಶಗಳಿಗೆ ನೀರುಣಿಸುತ್ತಿತ್ತು. ಕಾಲಾನಂತರದಲ್ಲಿ ಸರಿಯಾದ ನಿರ್ವಹಣೆಯಿಲ್ಲದೇ ಹೂಳು ತುಂಬಿಕೊಂಡಿದ್ದು ಇತ್ತೀಚಿನ ವರ್ಷಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ತುಂಬಿಕೊಂಡಿರುತ್ತದೆ.
ಈ ಇತಿಹಾಸ ಪ್ರಸಿದ್ಧ ಕೆರೆ ಅಭಿವೃದ್ಧಿಯಾಗಬೇಕು, ಸಂಸದರ ಆದರ್ಶ ಗ್ರಾಮಕ್ಕೆ ಕೀರೀಟವಾಗಬೇಕು ಎಂಬ ಕನಸು ಸ್ಥಳಿಯ ಜನರದ್ದು ಆಗಿತ್ತು. ಆದರೆ ಅಭಿವೃದ್ಧಿ ಭಾಗ್ಯ ಕಂಡಿರಲಿಲ್ಲ. ಈ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸಬಹುದು ಎಂಬ ಸಲಹೆಯೂ ಇದೆ. ಇದಕ್ಕಾಗಿ ಮಂಗಳೂರಿನ ತೋಟಗಾರಿಕಾ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಯನ್ನು ಪರಿಶೀಲನೆ ನಡೆಸಿದ್ದು ಕೆರೆಯನ್ನು ಅಭಿವೃದ್ಧಿ ಪಡಿಸುವ ಯೋಜನೆ ಹಾಕಿಕೊಂಡಿದ್ದಾರೆ. ಅಲ್ಲದೇ ಕೆರೆಯ ಪಕ್ಕದಲ್ಲೇ ಪುಷ್ಟವನವನ್ನೂ ನಿರ್ಮಾಣ ಮಾಡುವ ಯೋಜನೆ ತಯಾರಾಗಿದೆ.

ಸಂಪೂರ್ಣ ಬರಿದು:

ಕೆರೆ ಈಗ ಸಂಪೂರ್ಣವಾಗಿ ಬರಿದಾಗಿದ್ದು ಕೆರೆಯನ್ನು ಅಭಿವೃದ್ಧಿಪಡಿಸಲು ಇದು ಸಕಾಲವಾಗಿದೆ. ನೀರಿಲ್ಲದೇ ಇರುವ ಕಾರಣ ಕೆರೆಯ ಹೂಳೆತ್ತುವುದು ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಇಲಾಖೆಗಳು ಮುತುವರ್ಜಿ ವಹಿಸಬೇಕಿದೆ.

ಹಿಂದೊಮ್ಮೆ ಹೂಳು ತೆಗೆಯಲಾಗಿತ್ತು:

ಕೆಲ ವರ್ಷದ ಹಿಂದೊಮ್ಮೆ ಈ ಕೆರೆಯ ಹೂಳು ತೆಗೆಯಲಾಗಿತ್ತು. ಈ ಹೂಳನ್ನು ಕೆರೆಯ ಮೇಲ್ಭಾಗದಲ್ಲಿ ಹಾಕಲಾಗಿತ್ತು. ಮಳೆಗಾಲ ಮತ್ತೆ ಅದೇ ಕೆಸರು ಮಣ್ಣು ಕೆರೆಗೆ ಸೇರಿತ್ತು. ಹೂಳು ಈ ಬಾರಿ ತೆಗೆಯುವುದಿದ್ದರೆ ಮತ್ತೆ ಅದೇ ಸ್ಥಿತಿ ಆಗದಿರಲಿ ಎಂಬುದು ಸ್ಥಳೀಯರ ಒತ್ತಾಯ.

ಕೆರೆ ಅಭಿವೃದ್ಧಿ ಬಗ್ಗೆ ಮಾತನಾಡಿದ ಬಳ್ಪ ಪಿಡಿಒ ಶ್ಯಾಮ ಪ್ರಸಾದ್, “ಕೆರೆಯ ದುರಸ್ಥಿಗೆ ಇಲಾಖೆಗಳಿಂದ 1.25 ಕೋಟಿ ರೂ. ಬಿಡುಗಡೆ ಮಾಡುವ ಯೋಜನೆ ತಯಾರಾಗಿರುವ ಮಾಹಿತಿ ಇದೆ. ಚುನಾವಣಾ ಘೋಷಣೆ ಹಾಗೂ ನೀತಿ ಸಂಹಿತೆ ಇರುವ ಕಾರಣ ಮುಂದಿನ ಕ್ರಮಗಳು ಸ್ಥಗಿತಗೊಂಡಿವೆ” ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

1 hour ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

1 hour ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago