ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈಗ ಇನ್ನೊಂದು ಅಚ್ಚರಿ ಕಂಡಿದೆ. ಅತ್ಯಂತ ಪುರಾತನವಾದ ಸಂಪೂರ್ಣ ಶಿಲಾಮಯವಾದ ಹಾಗೂ ರಾಜ್ಯದಲ್ಲೇ ಅಪರೂಪ ಎನಿಸಿದ ತ್ರಿಶೂಲಿನೀ ದೇವಸ್ಥಾನದಲ್ಲಿ ಆಂಜನೇಯ ಪ್ರತಿಮೆ ಇದೆ. ಈ ಪ್ರತಿಮೆ ಬೆಳೆದಿದೆ, ಬೆಳೆಯುತ್ತಿದೆ. ಇದರ ವಿವರ ಇಲ್ಲಿದೆ..
ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನವು ಅತ್ಯಂತ ಪುರಾತನವಾದ ಶಿಲಾಮಯ ದೇಗುಲ. ಚೋಳರು, ಕದಂಬರ ಕಾಲದಲ್ಲಿ ಈ ದೇವಸ್ಥಾನ ರಚನೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ಕಳೆದ ಎರಡು ವರ್ಷದ ಹಿಂದೆ ಜೀರ್ಣೋದ್ಧಾರಗೊಂಡು ಈಗ ಪೂಜೆ ನಡೆಯುತ್ತಿದೆ. ಇಲ್ಲಿ ತ್ರಿಶೂಲಕ್ಕೆ ಪೂಜೆ ನಡೆಯುವುದು ವಿಶೇಷತೆ. ಹೀಗಾಗಿ ದಕ್ಷಿಣ ಭಾರತದ ಶಕ್ತಿ ಪೀಠ ಎಂದು ನಂಬಲಾಗುತ್ತದೆ. ಇಲ್ಲಿ ನಡೆಸುವ ಪ್ರಾರ್ಥನೆಗಳಿಗೆ ವಿಶೇಷವಾದ ಫಲ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಿಂದೆ ರಾಜರುಗಳು ಯಾವುದೇ ಕೆಲಸಕ್ಕೆ ಹೊರಡುವ ವೇಳೆ ಇಲ್ಲಿ ಪ್ರಾರ್ಥನೆ ಸಲ್ಲಿಸಿ ತೆರಳುತ್ತಿದ್ದರು. ಹೀಗಾಗಿ ಇದೊಂದು ಶಕ್ತಿ ಪೀಠ ಎಂದೇ ಕರೆಯಲಾಗುತ್ತಿತ್ತು. ಇದೀಗ ಜೀರ್ಣೋದ್ಧಾರಗೊಂಡು ವಾರ್ಷಿಕ ಉತ್ಸವಗಳು ನಡೆಯುತ್ತಿದೆ.
ಅದರ ಜೊತೆಗೆ ಈಗ ವಿಶೇಷವೊಂದು ಇಲ್ಲಿ ನಡೆದಿದೆ. ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿದ್ದು ಸುತ್ತು ಪೌಳಿಯ ಹೊರ ಶಿಲೆಯಲ್ಲಿ ಆಂಜನೇಯ ಪ್ರತಿಮೆ ಇದೆ. ಇದಕ್ಕೆ ಪೂಜೆಯೂ ನಡೆಯುತ್ತಿದೆ. ಈ ಪ್ರತಿಮೆ ಬೆಳೆಯುತ್ತಿದೆ.ಇದನ್ನು ಹತ್ತಿರದಿಂದ ಗಮನಿಸುವ ಹಾಗೂ ಪ್ರತೀ ದಿನವೂ ಪೂಜೆ ಮಾಡುವ ಶ್ರೀವತ್ಸ ಅವರು ಆಂಜನೇಯ ಪ್ರತಿಮೆ ಬೆಳೆಯುವ ಬಗ್ಗೆ ಮಾಹಿತಿ ನೀಡುತ್ತಾರೆ. ಕಳೆದ ವರ್ಷ ಆಂಜನೇಯ ಪ್ರತಿಮೆಗೆ ಬೆಳ್ಳಿಯ ಕವಚ ಮಾಡಲಾಗಿತ್ತು. ದಾನಿಗಳು ಇದನ್ನು ಸೇವಾ ರೂಪದಲ್ಲಿ ಸಲ್ಲಿಸಿದ್ದರು. ಇದೀಗ ಈ ಕವಚ ಅಳವಡಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಎಂ ವಿ. ಇದರ ಜೊತೆಗೆ ಈ ಹಿಂದೆ ಆಂಜನೇಯ ಪ್ರತಿಮೆಯ ಮೇಲೆ ಹೂವು ಇಡಲು ಸಾದ್ಯವಾಗುತ್ತಿರಲಿಲ್ಲ ಈಗ ಹೂವು ಇಡಲು ಸಾಧ್ಯವಾಗುತ್ತದೆ ಎಂದು ಶ್ರೀವತ್ಸ ವಿವರಣೆ ನೀಡುತ್ತಾರೆ. ಈ ಬಗ್ಗೆ ಹಿರಿಯರು ಹಾಗೂ ತಜ್ಞರೊಬ್ಬರ ಬಳಿ ಕೇಳಿದಾಗ ಇದು ಬೆಳೆಯುವ ಆಂಜನೇಯ ಪ್ರತಿಮೆ ಎಂದು ಹೇಳಿದ್ದರು ಎಂದು ವಿವರಣೆ ನೀಡುತ್ತಾರೆ ಶ್ರೀವತ್ಸ. ಈ ಹಿಂದೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದುಂಬಿಯೊಂದು ಬಂದಿರುವುದು ಹಾಗೂ ಮರುವರ್ಷ ಜಾತ್ರಾ ಉತ್ಸವದ ಸಂದರ್ಭವೂ ಅದೇ ಮಾದರಿ ದುಂಬಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರೆ, ದೇವಸ್ಥಾನ ಬ್ರಹ್ಮಕಲಶೋತ್ಸವದ ದಿನ ಫೋಟೊ ತೆಗೆದವರಿಗೂ ಗರ್ಭ ಗುಡಿಯಲ್ಲಿ ತ್ರಿಶೂಲದ ಮಾದರಿಯ ಚಿತ್ರ ಗೋಚರಿಸಿತ್ತು. ಇದೀಗ ಆಂಜನೇಯ ಪ್ರತಿಮೆ ಬೆಳೆವಣಿಗೆ ಇಲ್ಲಿ ಇನ್ನೊಂದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.
https://theruralmirror.com/?p=16076
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…