Advertisement
ವಿಶೇಷ ವರದಿಗಳು

ಬಳ್ಪ ತ್ರಿಶೂಲಿನೀ ದೇವಸ್ಥಾನದ ಆಂಜನೇಯ ಮೂರ್ತಿಯಲ್ಲಿ ಕಂಡ ಅಚ್ಚರಿ ಏನು ಗೊತ್ತಾ ?

Share

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಈಗ ಇನ್ನೊಂದು ಅಚ್ಚರಿ ಕಂಡಿದೆ. ಅತ್ಯಂತ ಪುರಾತನವಾದ ಸಂಪೂರ್ಣ ಶಿಲಾಮಯವಾದ ಹಾಗೂ ರಾಜ್ಯದಲ್ಲೇ ಅಪರೂಪ ಎನಿಸಿದ ತ್ರಿಶೂಲಿನೀ ದೇವಸ್ಥಾನದಲ್ಲಿ ಆಂಜನೇಯ ಪ್ರತಿಮೆ ಇದೆ. ಈ ಪ್ರತಿಮೆ ಬೆಳೆದಿದೆ, ಬೆಳೆಯುತ್ತಿದೆ. ಇದರ ವಿವರ ಇಲ್ಲಿದೆ..

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನವು ಅತ್ಯಂತ ಪುರಾತನವಾದ ಶಿಲಾಮಯ ದೇಗುಲ. ಚೋಳರು, ಕದಂಬರ ಕಾಲದಲ್ಲಿ ಈ ದೇವಸ್ಥಾನ ರಚನೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ಕಳೆದ ಎರಡು ವರ್ಷದ ಹಿಂದೆ ಜೀರ್ಣೋದ್ಧಾರಗೊಂಡು ಈಗ ಪೂಜೆ ನಡೆಯುತ್ತಿದೆ. ಇಲ್ಲಿ ತ್ರಿಶೂಲಕ್ಕೆ ಪೂಜೆ ನಡೆಯುವುದು ವಿಶೇಷತೆ. ಹೀಗಾಗಿ ದಕ್ಷಿಣ ಭಾರತದ ಶಕ್ತಿ ಪೀಠ ಎಂದು ನಂಬಲಾಗುತ್ತದೆ. ಇಲ್ಲಿ ನಡೆಸುವ ಪ್ರಾರ್ಥನೆಗಳಿಗೆ ವಿಶೇಷವಾದ ಫಲ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಿಂದೆ ರಾಜರುಗಳು ಯಾವುದೇ ಕೆಲಸಕ್ಕೆ ಹೊರಡುವ ವೇಳೆ ಇಲ್ಲಿ  ಪ್ರಾರ್ಥನೆ ಸಲ್ಲಿಸಿ ತೆರಳುತ್ತಿದ್ದರು. ಹೀಗಾಗಿ ಇದೊಂದು ಶಕ್ತಿ ಪೀಠ ಎಂದೇ ಕರೆಯಲಾಗುತ್ತಿತ್ತು. ಇದೀಗ ಜೀರ್ಣೋದ್ಧಾರಗೊಂಡು ವಾರ್ಷಿಕ ಉತ್ಸವಗಳು ನಡೆಯುತ್ತಿದೆ.

ಅದರ ಜೊತೆಗೆ ಈಗ ವಿಶೇಷವೊಂದು ಇಲ್ಲಿ ನಡೆದಿದೆ. ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿದ್ದು ಸುತ್ತು ಪೌಳಿಯ ಹೊರ ಶಿಲೆಯಲ್ಲಿ  ಆಂಜನೇಯ ಪ್ರತಿಮೆ ಇದೆ. ಇದಕ್ಕೆ ಪೂಜೆಯೂ ನಡೆಯುತ್ತಿದೆ. ಈ ಪ್ರತಿಮೆ ಬೆಳೆಯುತ್ತಿದೆ.ಇದನ್ನು ಹತ್ತಿರದಿಂದ ಗಮನಿಸುವ ಹಾಗೂ ಪ್ರತೀ ದಿನವೂ ಪೂಜೆ ಮಾಡುವ ಶ್ರೀವತ್ಸ ಅವರು ಆಂಜನೇಯ ಪ್ರತಿಮೆ ಬೆಳೆಯುವ ಬಗ್ಗೆ ಮಾಹಿತಿ ನೀಡುತ್ತಾರೆ.  ಕಳೆದ ವರ್ಷ ಆಂಜನೇಯ ಪ್ರತಿಮೆಗೆ ಬೆಳ್ಳಿಯ ಕವಚ ಮಾಡಲಾಗಿತ್ತು. ದಾನಿಗಳು ಇದನ್ನು  ಸೇವಾ ರೂಪದಲ್ಲಿ ಸಲ್ಲಿಸಿದ್ದರು. ಇದೀಗ ಈ ಕವಚ ಅಳವಡಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಎಂ ವಿ. ಇದರ ಜೊತೆಗೆ ಈ ಹಿಂದೆ ಆಂಜನೇಯ ಪ್ರತಿಮೆಯ ಮೇಲೆ ಹೂವು ಇಡಲು ಸಾದ್ಯವಾಗುತ್ತಿರಲಿಲ್ಲ ಈಗ ಹೂವು ಇಡಲು ಸಾಧ್ಯವಾಗುತ್ತದೆ ಎಂದು ಶ್ರೀವತ್ಸ ವಿವರಣೆ ನೀಡುತ್ತಾರೆ. ಈ ಬಗ್ಗೆ ಹಿರಿಯರು ಹಾಗೂ ತಜ್ಞರೊಬ್ಬರ ಬಳಿ ಕೇಳಿದಾಗ  ಇದು ಬೆಳೆಯುವ ಆಂಜನೇಯ ಪ್ರತಿಮೆ ಎಂದು ಹೇಳಿದ್ದರು ಎಂದು  ವಿವರಣೆ ನೀಡುತ್ತಾರೆ ಶ್ರೀವತ್ಸ. ಈ ಹಿಂದೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದುಂಬಿಯೊಂದು ಬಂದಿರುವುದು  ಹಾಗೂ ಮರುವರ್ಷ ಜಾತ್ರಾ ಉತ್ಸವದ ಸಂದರ್ಭವೂ ಅದೇ ಮಾದರಿ ದುಂಬಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರೆ, ದೇವಸ್ಥಾನ ಬ್ರಹ್ಮಕಲಶೋತ್ಸವದ ದಿನ ಫೋಟೊ ತೆಗೆದವರಿಗೂ ಗರ್ಭ ಗುಡಿಯಲ್ಲಿ  ತ್ರಿಶೂಲದ ಮಾದರಿಯ ಚಿತ್ರ ಗೋಚರಿಸಿತ್ತು. ಇದೀಗ ಆಂಜನೇಯ ಪ್ರತಿಮೆ ಬೆಳೆವಣಿಗೆ ಇಲ್ಲಿ ಇನ್ನೊಂದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

https://theruralmirror.com/?p=16076

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

17 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

19 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

19 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago