ಸುಬ್ರಹ್ಮಣ್ಯ: ಬದುಕಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃ ತ ಜೀವನ ಪ್ರಾಪ್ತವಾಗುತ್ತದೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲಿ ನಾವು ನಡೆದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೇಳಿದರು.
ಅವರು ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ನಡೆದ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದರು. ಉಪನಿಷತ್ ಮೊದಲಾದ ಗ್ರಂಥಗಳನ್ನು ಎಲ್ಲರಿಗೂ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೂ ಅವುಗಳ ಸಾರವನ್ನು ಅಳವಡಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದರೆ ಸುಗಮ ಜೀವನ ಸಾಧ್ಯ ಎಂದರು.
ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಬಸವೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್, ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡೆತ್ತಾಯ ಮುಖ್ಯಅತಿಥಿಗಳಾಗಿದ್ದರು. ಶಿಬಿರದ ಸಂಚಾಲಕ ಎಂ.ಕೃಷ್ಣ.ಭಟ್, ಕಾರ್ಯದರ್ಶಿ ಸತ್ಯಶಂಕರ ಭಟ್, ಪ್ರಭಾಕರ ಪಡ್ರೆ ಉಪಸ್ಥಿತರಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…