ಸುಬ್ರಹ್ಮಣ್ಯ: ಬದುಕಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃ ತ ಜೀವನ ಪ್ರಾಪ್ತವಾಗುತ್ತದೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲಿ ನಾವು ನಡೆದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೇಳಿದರು.
ಅವರು ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ನಡೆದ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದರು. ಉಪನಿಷತ್ ಮೊದಲಾದ ಗ್ರಂಥಗಳನ್ನು ಎಲ್ಲರಿಗೂ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೂ ಅವುಗಳ ಸಾರವನ್ನು ಅಳವಡಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದರೆ ಸುಗಮ ಜೀವನ ಸಾಧ್ಯ ಎಂದರು.
ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಬಸವೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್, ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡೆತ್ತಾಯ ಮುಖ್ಯಅತಿಥಿಗಳಾಗಿದ್ದರು. ಶಿಬಿರದ ಸಂಚಾಲಕ ಎಂ.ಕೃಷ್ಣ.ಭಟ್, ಕಾರ್ಯದರ್ಶಿ ಸತ್ಯಶಂಕರ ಭಟ್, ಪ್ರಭಾಕರ ಪಡ್ರೆ ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…