ಸುಳ್ಯ:ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ನಗರದ ಹಳೆಗೇಟು ಸಮೀಪ ಶನಿವಾರ ಸಂಜೆ ನಡೆದಿದೆ. ಹಳೆಗೇಟು ವಿದ್ಯಾನಗರದ ನಿವೃತ್ತ ಶಿಕ್ಷಕ ಹರಿಪ್ರಸಾದ್ ಅವರ ಪತ್ನಿ ನಿವೃತ್ತ ಶಿಕ್ಷಕಿ ಮೀನಾಕ್ಷಿ.ಕೆ.ಎ(66) ಮೃತಪಟ್ಟವರು.
ಹರಿಪ್ರಸಾದ್ ಮತ್ತು ಮೀನಾಕ್ಷಿ ಅವರು ಮುಖ್ಯ ರಸ್ತೆಯಲ್ಲಿ ರಿಕ್ಷಾ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಮೀನಾಕ್ಷಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಡೆಕೋಲಿನಲ್ಲಿ ಸಂಧಿಕರ ಮನೆಯಲ್ಲಿ ಪೂಜೆಗೆ ಹೋಗಿ ಹಿಂತಿರುಗಿ ಬಂದು ರಿಕ್ಷಾ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಹರಿಪ್ರಸಾದ್ ರಸ್ತೆ ದಾಟಿದ್ದರು. ಹಿಂದಿನಿಂದ ರಸ್ತೆ ದಾಟುತ್ತಿದ್ದ ಮೀನಾಕ್ಷಿ ಅವರಿಗೆ ಬಸ್ ಡಿಕ್ಕಿ ಹೊಡೆದಿದೆ. ಶಾಂತಿನಗರ, ಕೊಯಿಕುಳಿ, ಅಯ್ಯನಕಟ್ಟೆ ಸೇರಿ ಹಲವು ಕಡೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಮೀನಾಕ್ಷಿ ಅವರು ಆರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತಿ, ಮಕ್ಕಳಾದ ಶೋಭಾ, ಶ್ರೀರಂಜನಿ, ಗುರುರಾಜ್ ಅವರನ್ನು ಅಗಲಿದ್ದಾರೆ
ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…