ಬರ್ಮಿಂಗ್ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…