ಬರ್ಮಿಂಗ್ಹ್ಯಾಮ್: ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶಕ್ಕೆ ಜಯಕ್ಕೆ 315 ರನ್ ಗಳ ಗುರಿ ನೀಡಿದೆ. ಮೊದಲ ವಿಕೆಟ್ಗೆ ಭರ್ಜರಿ ಜೊತೆಯಾಟ ನಡೆಸಿದ ಹೊರತಾಗಿಯೂ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 314 ರನ್ ಗಳಿಸಿತು.
ಟಾಸ್ ಜಯಿಸಿದ ಭಾರತ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ವಿಕೆಟ್ ಜೊತೆಯಾಟದಲ್ಲಿ 180 ರನ್ ಗಳಿಸಿದ ರೋಹಿತ್ ಶರ್ಮಾ(104) ಹಾಗೂ ಕೆಎಲ್ ರಾಹುಲ್ (77)ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಆದರೆ, ಈ ಇಬ್ಬರು ಔಟಾದ ಬಳಿಕ ಉಳಿದ ದಾಂಡಿಗರಿಂದ ದೊಡ್ಡ ಮೊತ್ತ ದಾಖಲಾಗಲಿಲ್ಲ. ಬಾಂಗ್ಲಾದ ವೇಗದ ಬೌಲರ್ ಮುಸ್ತಫಿಝರ್ರಹ್ಮಾನ್(4-59)ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ರಿಷಭ್ ಪಂತ್ 48 ರನ್, ಧೋನಿ 35 ರನ್ ಗಳಿಸಿದರು. ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…