Advertisement

ಬಾಂಜಾರು ಮಲೆ ಸಂಪರ್ಕಕ್ಕೆ ಸ್ಟೀಲ್ ಬ್ರಿಡ್ಜ್ : ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕು

Share

ಬೆಳ್ತಂಗಡಿ: ಪ್ರವಾಹಕ್ಕೆ ಸಿಕ್ಕಿ  ಕಡಿದು ಹೋಗಿದ್ದ ಸಂಪರ್ಕ ಸೇತು  ಕೆಲವೇ ದಿನದಲ್ಲಿ ತಾತ್ಕಾಲಿಕವಾಗಿ ಮರು ನಿರ್ಮಾಣಗೊಳ್ಳುವ ಮೂಲಕ ಬಾಂಜಾರು ಮಲೆ ನಿವಾಸಿಗಳಿಗೆ ಹೊರಪ್ರಪಂಚ ಕಾಣುವಂತಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹಾಗೂ ಭೂ ಕುಸಿತದಿಂದಾಗಿ ಅಪಾರ ಹಾನಿ ಸಂಭವಿಸಿ ತತ್ತರಿಸಿ ಹೋಗಿದ್ದ ಬೆಳ್ತಂಗಡಿಯ ಗ್ರಾಮಗಳು ಅತ್ಯಂತ ವೇಗವಾಗಿ ಚೇತರಿಸಿಕೊಳ್ಳುತ್ತಿದೆ. ಅದಕ್ಕೆ ಉದಾಹರಣೆ ಕುಕ್ಕಾವು ಸೇತುವೆ, ಹೊಸಮಠ ಸೇತುವೆ ಹಾಗೂ ಬಾಂಜಾರುಮಲೆಯ ಸ್ಟೀಲ್ ಬ್ರಿಡ್ಜ್. ತಿಂಗಳ ಕಾಲ ಸಂಪರ್ಕವಿಲ್ಲದೆ ಕೊರೆಯಬೇಕಾಗಿ ಬರಲಿದೆ ಎಂದು ಭಾವಿಸಿದ್ದ ಜನರಿಗೆ ಒಂದೇ ವಾರದಲ್ಲಿ ತಾತ್ಕಾಲಿಕ ಸೇತುವೆಗಳನ್ನು ನಿರ್ಮಿಸಿ ಬೆಳ್ತಂಗಡಿ ಮಾದರಿಯಾಗಿದೆ.

ಕಡಿದು ಹೋಗಿದ್ದ ದಿಡುಪೆಯ ಸೇತುವೆಯನ್ನು ಹಾಗೂ ಹೊಸಮಠ ಸೇತುವೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿ ವಾಹನ ಸಂಚಾರಕ್ಕೆ ಬಿಡಲಾಗಿದ್ದರೆ ಇಂದು ಬಾಂಜಾರು ಮಲೆಯಲ್ಲಿ ಕೊಚ್ಚಿ ಹೋಗಿದ್ದ ಸೇತುವೆಯ ಬದಲಾಗಿ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಕಾನನದ ನಡುವೆ ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕನ್ನು ನೀಡಲಾಗಿದೆ.
ಬಾಂಜಾರು ಮಲೆ ಮಲೆಕುಡಿಯರ ಕಾಲೊನಿಗೆ ಸಂಪರ್ಕ ಕಲ್ಪಿಸುವ ಸೇತುವೆ ಭಾರೀ ಮಳೆಗೆ ಕೊಚ್ಚಿ ಹೋಗಿತ್ತು ಇಲ್ಲಿನ ಸುಮಾರು 40 ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಹೊರ ಪ್ರಪಂಚದೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದರು ಕಳೆದ ಒಂದು ವಾರದಿಂದ ಈ ಜನರು ಆಹಾರಕ್ಕೂ ಪರದಾಡುವಂತಾಗಿತ್ತು. ತಾಲೂಕು ಆಡಳಿತವೇ ಇವರಿಗೆ ಆಹಾರವನ್ನು ಪೂರೈಸಿತ್ತು. ಇದೀಗ ಒಂದೇ ವಾರದಲ್ಲಿ ಬಾಂಜಾರು ಮಲೆಗೆ ವಾಕಿಂಗ್ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಅವರಿಗೆ ಹೊರಪ್ರಪಂಚದೊಂದಿಗೆ ಸಂಪರ್ಕ ಸಾಧಿಸುವಂತಾಗಿದೆ.

ನಿರ್ಮಾಣಗೊಂಡಿರುವ ವಾಕಿಂಗ್ ಸ್ಟೀಲ್ ಬ್ರಿಡ್ಜ್ 42 ಅಡಿ ಉದ್ದವಿದ್ದು 4 ಅಡಿ ಅಗಲವಿದೆ. ನದಿಯಿಂದ 15 ಮೀಟರ್ ಎತ್ತರದಲ್ಲಿ ಸೇತುವೆಯಿದೆ. ಪುತ್ತೂರಿನ ಮಾಸ್ಟರ್ ಪ್ಲಾನರಿ ಸಂಸ್ಥೆಯವರು ಇದನ್ನು 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಮಂಗಳೂರಿನ ಕಾರ್ಯಪಾಲಕ ಇಂಜಿನಿಯರ್ ಯಶವಂತ್ ಹಾಗೂ ಬೆಳ್ತಂಗಡಿಯ ಕಾರ್ಯಪಾಲಕ ಇಂಜಿನಿಯರ್ ಶಿವಪ್ರಸಾದ್ ಅಜಿಲ ಅವರು ಉಸ್ತುವಾರಿ ವಹಿಸಿಕೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

9 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

15 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

1 day ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago