Advertisement

ಬಾಂಜಾರು ಮಲೆ ಸಂಪರ್ಕಕ್ಕೆ ಸ್ಟೀಲ್ ಬ್ರಿಡ್ಜ್ : ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕು

Share

ಬೆಳ್ತಂಗಡಿ: ಪ್ರವಾಹಕ್ಕೆ ಸಿಕ್ಕಿ  ಕಡಿದು ಹೋಗಿದ್ದ ಸಂಪರ್ಕ ಸೇತು  ಕೆಲವೇ ದಿನದಲ್ಲಿ ತಾತ್ಕಾಲಿಕವಾಗಿ ಮರು ನಿರ್ಮಾಣಗೊಳ್ಳುವ ಮೂಲಕ ಬಾಂಜಾರು ಮಲೆ ನಿವಾಸಿಗಳಿಗೆ ಹೊರಪ್ರಪಂಚ ಕಾಣುವಂತಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹಾಗೂ ಭೂ ಕುಸಿತದಿಂದಾಗಿ ಅಪಾರ ಹಾನಿ ಸಂಭವಿಸಿ ತತ್ತರಿಸಿ ಹೋಗಿದ್ದ ಬೆಳ್ತಂಗಡಿಯ ಗ್ರಾಮಗಳು ಅತ್ಯಂತ ವೇಗವಾಗಿ ಚೇತರಿಸಿಕೊಳ್ಳುತ್ತಿದೆ. ಅದಕ್ಕೆ ಉದಾಹರಣೆ ಕುಕ್ಕಾವು ಸೇತುವೆ, ಹೊಸಮಠ ಸೇತುವೆ ಹಾಗೂ ಬಾಂಜಾರುಮಲೆಯ ಸ್ಟೀಲ್ ಬ್ರಿಡ್ಜ್. ತಿಂಗಳ ಕಾಲ ಸಂಪರ್ಕವಿಲ್ಲದೆ ಕೊರೆಯಬೇಕಾಗಿ ಬರಲಿದೆ ಎಂದು ಭಾವಿಸಿದ್ದ ಜನರಿಗೆ ಒಂದೇ ವಾರದಲ್ಲಿ ತಾತ್ಕಾಲಿಕ ಸೇತುವೆಗಳನ್ನು ನಿರ್ಮಿಸಿ ಬೆಳ್ತಂಗಡಿ ಮಾದರಿಯಾಗಿದೆ.

ಕಡಿದು ಹೋಗಿದ್ದ ದಿಡುಪೆಯ ಸೇತುವೆಯನ್ನು ಹಾಗೂ ಹೊಸಮಠ ಸೇತುವೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿ ವಾಹನ ಸಂಚಾರಕ್ಕೆ ಬಿಡಲಾಗಿದ್ದರೆ ಇಂದು ಬಾಂಜಾರು ಮಲೆಯಲ್ಲಿ ಕೊಚ್ಚಿ ಹೋಗಿದ್ದ ಸೇತುವೆಯ ಬದಲಾಗಿ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಕಾನನದ ನಡುವೆ ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕನ್ನು ನೀಡಲಾಗಿದೆ.
ಬಾಂಜಾರು ಮಲೆ ಮಲೆಕುಡಿಯರ ಕಾಲೊನಿಗೆ ಸಂಪರ್ಕ ಕಲ್ಪಿಸುವ ಸೇತುವೆ ಭಾರೀ ಮಳೆಗೆ ಕೊಚ್ಚಿ ಹೋಗಿತ್ತು ಇಲ್ಲಿನ ಸುಮಾರು 40 ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಹೊರ ಪ್ರಪಂಚದೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದರು ಕಳೆದ ಒಂದು ವಾರದಿಂದ ಈ ಜನರು ಆಹಾರಕ್ಕೂ ಪರದಾಡುವಂತಾಗಿತ್ತು. ತಾಲೂಕು ಆಡಳಿತವೇ ಇವರಿಗೆ ಆಹಾರವನ್ನು ಪೂರೈಸಿತ್ತು. ಇದೀಗ ಒಂದೇ ವಾರದಲ್ಲಿ ಬಾಂಜಾರು ಮಲೆಗೆ ವಾಕಿಂಗ್ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಅವರಿಗೆ ಹೊರಪ್ರಪಂಚದೊಂದಿಗೆ ಸಂಪರ್ಕ ಸಾಧಿಸುವಂತಾಗಿದೆ.

ನಿರ್ಮಾಣಗೊಂಡಿರುವ ವಾಕಿಂಗ್ ಸ್ಟೀಲ್ ಬ್ರಿಡ್ಜ್ 42 ಅಡಿ ಉದ್ದವಿದ್ದು 4 ಅಡಿ ಅಗಲವಿದೆ. ನದಿಯಿಂದ 15 ಮೀಟರ್ ಎತ್ತರದಲ್ಲಿ ಸೇತುವೆಯಿದೆ. ಪುತ್ತೂರಿನ ಮಾಸ್ಟರ್ ಪ್ಲಾನರಿ ಸಂಸ್ಥೆಯವರು ಇದನ್ನು 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಮಂಗಳೂರಿನ ಕಾರ್ಯಪಾಲಕ ಇಂಜಿನಿಯರ್ ಯಶವಂತ್ ಹಾಗೂ ಬೆಳ್ತಂಗಡಿಯ ಕಾರ್ಯಪಾಲಕ ಇಂಜಿನಿಯರ್ ಶಿವಪ್ರಸಾದ್ ಅಜಿಲ ಅವರು ಉಸ್ತುವಾರಿ ವಹಿಸಿಕೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago