Advertisement
The Rural Mirror ಫಾಲೋಅಪ್

ಬಾಗು ಬೆನ್ನು ಹುಡುಗಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ : ಕೋಟೆ ಫೌಂಡೇಷನ್ ನೆರವು

Share

ಸುಳ್ಯ: ಥೊರಾಸಿಕ್ ಸ್ಕೋಲಿಯೋಸಿಸ್ ರೋಗದಿಂದ 89 ಡಿಗ್ರಿಯಷ್ಟು ಬಾಗಿದ್ದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ಕಡುಬಡ ಕುಟುಂಬದ 10 ವರ್ಷ ಬಾಲಕಿ ಅಮೃತಾ ಯಶಸ್ವಿ ಬಳಿಕ ಆಸ್ಪತ್ರೆಯಿಂದ ಮನೆಗೆ ಹೆಜ್ಜೆ ಇರಿಸಿದ್ದಾಳೆ.
ಊಟಕ್ಕೂ ಪರದಾಡಬೇಕಾದ ಸ್ಥಿತಿಯಲ್ಲಿದ್ದ ಕುಟುಂಬದ ಬಾಲಕಿಯ ಬದುಕಿನಲ್ಲಿ ಕೋಟೆ ಫೌಂಡೇಷನ್ ಜೀವನದ ಆಸೆ ಚಿಗುರೊಡೆಸಿದೆ. ಬೆನ್ನುಹುರಿ ಮೂಳೆ ತಜ್ಞ ಡಾ.ಈಶ್ವರ್ ಕೀರ್ತಿ ಹಾಗು ಮಂಗಳಾ ನರ್ಸಿಂಗ್ ಹೋಮ್‍ನ ಡಾ.ಗಣಪತಿ ಶುಲ್ಕ ರಹಿತವಾಗಿ ಯಶಸ್ವಿ ಚಿಕಿತ್ಸೆ ನೀಡಿದ್ದಾರೆ.

ಥೊರಾಸಿಕ್ ಸ್ಕೋಲಿಯೋಸಿಸ್ ಎಂದರೆ ಶಕ್ತಿ ಇಲ್ಲದೆ ಬೆನ್ನು ಬಾಗುವ ರೋಗ. ಮೆತ್ತಡ್ಕ ಸತೀಶ್ ನಾಯ್ಕ ಮತ್ತು ಗಾಯತ್ರಿ ನಾಯ್ಕ ದಂಪತಿ ಮಗಳಾದ ಅಮೃತಾಳಿಗೆ ಕೆಲವು ಸಮಯದ ಹಿಂದೆ ರೋಗ ಕಾಣಿಸಿಕೊಂಡಿತು. ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಬಾಗಲು ಆರಂಭಿಸಿತು. ಈ ಚಿಕಿತ್ಸೆಗೆ ಸುಮಾರು 6 ಲಕ್ಷಕ್ಕೂ ಅಧಿಕ ಖರ್ಚನ್ನು ಹಲವು ಆಸ್ಪತ್ರೆಗಳು ಅಂದಾಜಿಸಿದ್ದವು.

ಮಂಗಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ:ಊರಿನ ಯುವಕರು ಮತ್ತು ಕೋಟೆ ಫೌಂಡೇಷನ್‍ನವರು ಅಮೃತಾಳಿಗೆ ಚಿಕಿತ್ಸೆ ಕೊಡಿಸಲು ಮುಂದೆ ಬಂದಿದ್ದಾರೆ. ಮಂಗಳೂರಿನ ಬೆನ್ನುಹುರಿ ತಜ್ಞ ಡಾ.ಈಶ್ವರ ಕೀರ್ತಿ ಚಿಕಿತ್ಸೆ ನೀಡಲು ಸಮ್ಮತಿಸಿದ್ದಾರೆ. ಮಂಗಳಾ ನರ್ಸಿಂಗ್ ಹೋಮ್‍ನ ವೈದ್ಯಕೀಯ ನಿರ್ದೇಶಕ ಹಾಗೂ ಅರಿವಳಿಗೆ ತಜ್ಞ ಡಾ.ಗಣಪತಿ ತಮ್ಮ ಆಸ್ಪತ್ರೆಯಲ್ಲಿ ಔಷಧಿ ಹೊರತುಪಡಿಸಿ ಇತರ ಖರ್ಚನ್ನು ಕಡಿತಗೊಳಿಸಿದ್ದಾರೆ. ಇದೇ ತಿಂಗಳ 6 ರಂದು ಸತತ 6 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮೂಲಕ ಬೆನ್ನುಹುರಿಯನ್ನು ಸರಿಪಡಿಸಲಾಗಿದೆ.
ಬೆನ್ನು ಹುರಿಯ ಬಳಿ ಇರಿಸಬೇಕಾಗಿದ್ದ ಡೆಪ್ಯು ಇಂಪ್ಲಾಂಟ್ ಅನ್ನು ಆಮದು ಮಾಡಲಾಗಿದ್ದು, 1.5 ಲಕ್ಷ ರೂಪಾಯಿಗಳ ವೆಚ್ಚ ತಗುಲಿದೆ. ಡಾ.ಈಶ್ವರ ಕೀರ್ತಿಯ ಮನವಿಗೆ ಸ್ಪಂದಿಸಿ ಔಷಧ ಕಂಪೆನಿಯೂ ದರ ಕಡಿತಗೊಳಿಸಿದೆ. ಒಟ್ಟಾರೆ 3ಲಕ್ಷ ರೂಪಾಯಿಗಳಲ್ಲಿ ಚಿಕಿತ್ಸೆಯಾಗಿದೆ. ಇಬ್ಬರೂ ವೈದ್ಯರೂ ಉಚಿತ ಸೇವೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಸುಳ್ಯ ತಾಲೂಕಿನ ಸಾಮಾಜಿಕ ಧುರೀಣ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮಾಜಿ ಅಧ್ಯಕ್ಷ ಕಳಂಜ ಗ್ರಾಮದ ದಿ.ಕೋಟೆ ವಸಂತ್‍ಕುಮಾರ್ ಸ್ಮರಣಾರ್ಥ ಅವರ ಪುತ್ರ, ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ರಘುರಾಮ್ ಕೋಟೆ ಈ ಕೋಟೆ ಫೌಂಡೇಷನಿನ ಸ್ಥಾಪಕರು. ಪ್ರಚಾರವನ್ನೇ ಬಯಸದೇ ಅದೇಷ್ಟೋ ಸಾಮಾನ್ಯ ಜನರಿಗೆ ನೆರವಿನ ಹಸ್ತ ಚಾಚಿ ದಾರಿದೀಪವಾಗಿದ್ದಾರೆ.

ಅಮೃತಾಳ ಚಿಕಿತ್ಸೆ ಯಶಸ್ವಿಯಾಗಿದೆ. ಬೆಳವಣಿಗೆ ಕಾರಣ ಮುಂದಿನ ದಿನಗಳಲ್ಲಿ ವ್ಯತ್ಯಾಸ ಬರುವುದು ಸಹಜ. ಆಗ ಸುಲಭದಲ್ಲಿ ಚಿಕಿತ್ಸೆ ಮುಂದುವರಿಸಿ ಪರಿಹಾರ ಮಾಡಿಕೊಳ್ಳಬಹುದೆಂದು ವೈದ್ಯರು ತಿಳಿಸಿರುವುದಾಗಿ ಕೋಟೆ ಫೌಂಡೇಷನ್ ಸಂಚಾಲಕ ರಘುರಾಮ ಕೋಟೆ  ತಿಳಿಸಿದ್ದಾರೆ.

ಇದರ ಜೊತೆ ವಿವಿಧ ಸಂಘ ಸಂಸ್ಥೆಗಳು ನೆರವು ನೀಡಿದ್ದವು. ಸ್ಥಳೀಯರು ವಿವಿಧ ಮಂದಿ ಸಾಮಾಜಿಕ ಕಾರ್ಯಕರ್ತರು ಈ ಬಗ್ಗೆ ಪ್ರಯತ್ನ ಮಾಡಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

7 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

8 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago