ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತಿದೆ. ಇದರ ಅಂಗವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸುತ್ತಿವೆ.
ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…