ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತಿದೆ. ಇದರ ಅಂಗವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸುತ್ತಿವೆ.
ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…