ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಯುತಿದೆ. ಇದರ ಅಂಗವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸುತ್ತಿವೆ.
ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದೆ. ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…