ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿ: ತಲೆ ಎತ್ತಲಿದೆ ಅಂತಾರಾಜ್ಯ ಸಂಪರ್ಕ ಸೇತು

January 22, 2020
10:18 PM

ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ.ರಲ್ಲಿ ಬಾರ್ಪಣೆ ಎಂಬಲ್ಲಿ ಕಿರಿದಾದ ಹಳೆಯ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಒಂದು ತಿಂಗಳಿನಿಂದ ಕಾಮಗಾರಿ ನಡೆಯುತ್ತಿದ್ದು ತಳಪಾಯ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆಗೊಂಡಿದೆ. ಮಾರ್ಚ್ ಕೊನೆಗೆ ಸೇತುವೆ ಕಾಮಗಾರಿ ಮುಗಿಸಿ ಸಂಚಾರಕ್ಕೆ ತೆರೆದುಕೊಳ್ಳುವ ಯೋಜನೆ ರೂಪಿಸಲಾಗಿದೆ.

19 ಮೀಟರ್ ಉದ್ದದ ಸೇತುವೆ: 19.34 ಮೀಟರ್ ಉದ್ದದ 10 ಮೀಟರ್ ಕ್ಯಾರಿಯೇಜ್ ವೇ ಅಗಲದ ಸೇತುವೆ ನಿರ್ಮಾಣಗೊಳ್ಳಲಿದೆ. 8.42 ಮೀಟರ್ ಅಗಲದ ಎರಡು ಅಂಕಣಗಳು, ಎರಡು ಅಬಾಟ್‍ಮೆಂಟ್, ಎರಡು ವೃತ್ತಾಕಾರದ ಪಿಲ್ಲರ್ ಗಳು ಇರುವ  ಫೌಂಡನ್ ಒಳಗೊಂಡಂತೆ ಆರ್ ಸಿ ಸಿ ಸೇತುವೆ ನಿರ್ಮಾಣವಾಗಲಿದೆ ಎಂದು ಸುಳ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

ಸಂಚಾರಕ್ಕೆ ಬದಲಿ ರಸ್ತೆ:ಕಾಮಗಾರಿ ನಡೆಯುತ್ತಿರುವ ನಿಟ್ಟಿನಲ್ಲಿ 2020 ಮಾರ್ಚ್ 31ರವರೆಗೆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸಲಾಗುತಿದೆ. ಸೇತುವೆಯ ಎರಡೂ ಬದಿಯಲ್ಲಿ ತೆಂಗು, ಅಡಿಕೆ ತೋಟವಿರುವ ಕಾರಣ ಬದಲಿ ರಸ್ತೆ ನಿರ್ಮಿಸಲು ಅವಕಾಶ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸಲಾಗುತಿದೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳದ ಮೇಲ್ಭಾಗದಲ್ಲಿ ಜನರಿಗೆ ನಡೆದಾಡಲು ಒಂದು ತಾತ್ಕಾಲಿಕ ಕಾಲು ಸೇತುವೆಯನ್ನೂ ನಿರ್ಮಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror