ಬಾಲಚಂದ್ರ ಕಳಗಿಯವರ ಸ್ಮರಣಾರ್ಥ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

October 25, 2019
7:01 AM

ಸಂಪಾಜೆ: ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ  ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

Advertisement

ಕೊಡಗು-ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಮಡಿಕೇರಿ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಮಡಿಕೇರಿ,  ಲಯನ್ಸ್ ಕ್ಲಬ್ ಸಂಪಾಜೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರವನ್ನು  ಲಯನ್ ಕಿಶೋರ್ ಕಲ್ಲುಗುಂಡಿ  ಉದ್ಘಾಟಿಸಿದರು.  ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಕುಮಾರ್ ಚೆದ್ಕಾರ್ ಸಭಾಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಡಾ.ಕೃಪಾಲಿನಿ, ಡಾ.ಕಿರಣ್ ಭಟ್ ಡಾ.ವಿಕ್ರಂ ಭಟ್,  ಡಾ. ಫರೀನ್, ಲಯನ್ಸ್ ಕ್ಲಬ್ ಸಂಪಾಜೆಯ ಕಿಶೋರ್ ಕಲ್ಲುಗುಂಡಿ, ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಉರುಬೈಲು, ಉದ್ಭವ ಟ್ರಸ್ಟ್ ನ ಮೇಲ್ವಿಚಾರಕ ಮಲ್ಲಿಕಾರ್ಜುನಪ್ಪ, ಆರೋಗ್ಯ ಅಧಿಕಾರಿ ಲೋಕನಾಥ್, ಆರೋಗ್ಯ ಪರಿವೀಕ್ಷಕ  ಅನಂತ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ  ರಮಾದೇವಿ ಬಾಲಚಂದ್ರ ಕಳಗಿ, ಎನ್.ಎಸ್ ದೇವಿಪ್ರಸಾದ್, ಇಂದಿರಾ ದೇವಿಪ್ರಸಾದ್, ಹಿರಿಯ ವೈದ್ಯಾಧಿಕಾರಿಗಳಾದ ಜಿ.ಕೆ.ಸುಬ್ರಮಣ್ಯ ಭಟ್, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೈ.ಕೆ.ಮಾಲತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ  ವಿನೀತ್, ಲಯನ್ ಸಚಿತ್ ರೈ, ಸಂಧ್ಯಾ ಸಚಿತ್ ರೈ, ಲಯನ್ ನವೀನ್ ಕುಮಾರ್ ಹಾಗೂ ಸಂಪಾಜೆ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಮತ್ತು ಸಂಪಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಲಯನ್ ಕಿಶೋರ್ ಸ್ವಾಗತಿಸಿ ಲೋಕನಾಥ್  ವಂದಸಿ, ಮಲ್ಲಿಕಾರ್ಜುನಪ್ಪ ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿ ಯಶೋಧ  ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group