ಬಾಳಿಲ : 2019-20ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಯ ಪೂರ್ವಭಾವಿ ಸಭೆ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.
ಸಭೆಯನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಉದ್ಘಾಟಿಸಿ ಇಲಾಖಾ ಗುಂಪಾಟ ಹಾಗು ಮೇಲಾಟಗಳ ಸಂಘಟನೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಬೋಧಿನಿ ಪ್ರೌಢ ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ವಹಿಸಿದರು.
ವೇದಿಕೆಯಲ್ಲಿ ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣೇಶ್.ಪಿ, ಗ್ರೇಡ್ 1 ದೈಹಿಕ ಶಿಕ್ಷಕರ ಸಂಘ ರಾಜ್ಯ ಪರಿಷತ್ ಸದಸ್ಯ ಸಹದೇವ ಏರಾಜೆ, ದೈಹಿಕ ಶಿಕ್ಷಕರ ತಾಲೂಕು ಅಧ್ಯಕ್ಷೆ ವನಿತಾ ಕಾಂತಮಂಗಲ, ಗ್ರೇಡಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಧನಂಜಯ ಸಂಪಾಜೆ, ಸುಳ್ಯದ ಸ್ಪೋರ್ಟ್ ವನ್ ಮಾಲಕ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯೋಪಾಧ್ಯಾಯ ಯಶೋಧರ ನಾರಾಲು ಸ್ವಾಗತಿಸಿ, ದೈಹಿಕ ಶಿಕ್ಷಕ ಹರಿಪ್ರಸಾದ್ ರೈ ಜಿ ವಂದಿಸಿದರು. ಶಿಕ್ಷಕ ಉದಯ್ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…