ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2018-19ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲ ಯ ಸಂಚಾಲಕ ಗಣೇಶ್ ಪ್ರಸಾದ್ ಪ್ರತಿಭಾನ್ವಿತರನ್ನು ಪುರಸ್ಕರಿಸಿದರು.
ಬಾಳಿಲ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣರಾವ್ ಯು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರತಿಭಾನ್ವಿತರನ್ನು ಹಿರಿಯ ಶಿಕ್ಷಕ ಯಶೋಧರ ಎನ್ ಪರಿಚಯಿಸಿದರು. ದತ್ತಿನಿಧಿ ಬಹುಮಾನಗಳ ಬಗ್ಗೆ ಉದಯಕುಮಾರ್ ರೈ ಎಸ್ ವಿವರಿಸಿದರು. ಇದೇ ಸಂದರ್ಭದಲ್ಲಿ ‘ಹಸ್ತಲಿಖಿತ ಪತ್ರಿಕೆ’ಯನ್ನು ಬಿಡುಗಡೆ ಗೊಳಿಸಲಾಯಿತು. ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕ ವೆಂಕಟೇಶ್ ಕುಮಾರ್ ಯು ವಿವರಣೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಅಕ್ಷತಾ ಎಂ ಹಾಗೂ ಪೋಷಕರ ಪರವಾಗಿ ಶ್ರೀನಿವಾಸ ಜೋಗಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಎಂ. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಲೋಕೇಶ್ ಬಿ ವಂದಿಸಿ, ಸಹಶಿಕ್ಷಿ ಸಹನಾ ಬಿ.ಬಿ ನಿರೂಪಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…