ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 2018-19ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲ ಯ ಸಂಚಾಲಕ ಗಣೇಶ್ ಪ್ರಸಾದ್ ಪ್ರತಿಭಾನ್ವಿತರನ್ನು ಪುರಸ್ಕರಿಸಿದರು.
ಬಾಳಿಲ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣರಾವ್ ಯು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರತಿಭಾನ್ವಿತರನ್ನು ಹಿರಿಯ ಶಿಕ್ಷಕ ಯಶೋಧರ ಎನ್ ಪರಿಚಯಿಸಿದರು. ದತ್ತಿನಿಧಿ ಬಹುಮಾನಗಳ ಬಗ್ಗೆ ಉದಯಕುಮಾರ್ ರೈ ಎಸ್ ವಿವರಿಸಿದರು. ಇದೇ ಸಂದರ್ಭದಲ್ಲಿ ‘ಹಸ್ತಲಿಖಿತ ಪತ್ರಿಕೆ’ಯನ್ನು ಬಿಡುಗಡೆ ಗೊಳಿಸಲಾಯಿತು. ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕ ವೆಂಕಟೇಶ್ ಕುಮಾರ್ ಯು ವಿವರಣೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಅಕ್ಷತಾ ಎಂ ಹಾಗೂ ಪೋಷಕರ ಪರವಾಗಿ ಶ್ರೀನಿವಾಸ ಜೋಗಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಎಂ. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಲೋಕೇಶ್ ಬಿ ವಂದಿಸಿ, ಸಹಶಿಕ್ಷಿ ಸಹನಾ ಬಿ.ಬಿ ನಿರೂಪಿಸಿದರು.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…