ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…