Advertisement
ನಮ್ಮೂರ ಸುದ್ದಿ

ಬಾಳುಗೋಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾಡಾನೆ

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿರುವುದು ಬುಧವಾರ ಕಂಡುಬಂದಿಂದಿದೆ. ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಬುಧವಾರ ಕಾಡಿನಿಂದ ಹರಿದು ಬರುವ ಝರಿ ನೀರಿನ ಪೈಪು ಸರಿಪಡಿಸಲೆಂದು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು.

Advertisement
Advertisement
Advertisement
Advertisement

ಆನೆ ಇರುವುದರ ಬಗ್ಗೆ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.  ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು  ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿದೆ. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿದೆ.  ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿದೆ.

Advertisement

ಬಾಳುಗೋಡು ಪರಿಸರದ ಪದಕ ಮಿತ್ತಡ್ಕ ಪರಿಸರದಲ್ಲಿ ಕಳೆದ ಹತ್ತು ದಿನಗಳಿಂದ ಆನೆಯೊಂದು ಆಗಾಗ್ಗೆ ಪರಿಸರದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದು ಕೃಷಿಕರ ತೋಟಗಳಿಗೆ ದಾಳಿ ನಡೆಸುತ್ತಿತ್ತು. ಬುಧವಾರ ಗಾಯಗೊಂಡ ಸ್ಥಿತಿಯಲ್ಲಿ ಕಂಡು ಬಂದಿರುವ ಆನೆ ಇದೇ ಆಗಿರಬಹುದೆನ್ನುವ ಶಂಕೆಯನ್ನು ಸ್ಥಳಿಯ ಮಿತ್ತಡ್ಕ ನಿವಾಸಿ ಪ್ರಶಾಂತ ಎನ್ನುವವರು ವ್ಯಕ್ತಪಡಿಸಿದರು.
ಬಾಳುಗೋಡು ಮೀಸಲು ಅರಣ್ಯದೊಳಗೆ ಕಾಡಾನೆ ಗಾಯಗೊಂಡು ಇರುವುದು ನಮ್ಮ ಗಮನಕ್ಕೆ ಬಂದಿದೆ.  ಆನೆಗೆ ಚಿಕಿತ್ಸೆಯ ಅಗತ್ಯತೆ ಇದೆ. ಗುರುವಾರ ಮತ್ತೆ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ಗಮನಿಸುತ್ತೇವೆ ಎಂದು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಆರ್ ಎಪ್ ಒ ತ್ಯಾಗರಾಜ್  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

8 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

8 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

9 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

18 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

18 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

18 hours ago