Advertisement
ನಮ್ಮೂರ ಸುದ್ದಿ

ಬಾಳುಗೋಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾಡಾನೆ

Share

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿರುವುದು ಬುಧವಾರ ಕಂಡುಬಂದಿಂದಿದೆ. ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಬುಧವಾರ ಕಾಡಿನಿಂದ ಹರಿದು ಬರುವ ಝರಿ ನೀರಿನ ಪೈಪು ಸರಿಪಡಿಸಲೆಂದು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು.

Advertisement
Advertisement

ಆನೆ ಇರುವುದರ ಬಗ್ಗೆ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.  ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು  ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿದೆ. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿದೆ.  ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿದೆ.

Advertisement

ಬಾಳುಗೋಡು ಪರಿಸರದ ಪದಕ ಮಿತ್ತಡ್ಕ ಪರಿಸರದಲ್ಲಿ ಕಳೆದ ಹತ್ತು ದಿನಗಳಿಂದ ಆನೆಯೊಂದು ಆಗಾಗ್ಗೆ ಪರಿಸರದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದು ಕೃಷಿಕರ ತೋಟಗಳಿಗೆ ದಾಳಿ ನಡೆಸುತ್ತಿತ್ತು. ಬುಧವಾರ ಗಾಯಗೊಂಡ ಸ್ಥಿತಿಯಲ್ಲಿ ಕಂಡು ಬಂದಿರುವ ಆನೆ ಇದೇ ಆಗಿರಬಹುದೆನ್ನುವ ಶಂಕೆಯನ್ನು ಸ್ಥಳಿಯ ಮಿತ್ತಡ್ಕ ನಿವಾಸಿ ಪ್ರಶಾಂತ ಎನ್ನುವವರು ವ್ಯಕ್ತಪಡಿಸಿದರು.
ಬಾಳುಗೋಡು ಮೀಸಲು ಅರಣ್ಯದೊಳಗೆ ಕಾಡಾನೆ ಗಾಯಗೊಂಡು ಇರುವುದು ನಮ್ಮ ಗಮನಕ್ಕೆ ಬಂದಿದೆ.  ಆನೆಗೆ ಚಿಕಿತ್ಸೆಯ ಅಗತ್ಯತೆ ಇದೆ. ಗುರುವಾರ ಮತ್ತೆ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ಗಮನಿಸುತ್ತೇವೆ ಎಂದು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಆರ್ ಎಪ್ ಒ ತ್ಯಾಗರಾಜ್  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

7 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

7 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

12 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

12 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

13 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

14 hours ago