ಸುಳ್ಯ: ರೋಟರಿ ಕ್ಲಬ್ ಸುಳ್ಯ ಹಾಗೂ ರೋಟರಾಕ್ಟ್ ಕ್ಲಬ್ ಸುಳ್ಯ ಜಂಟಿಯಾಗಿ ಬಾಳುಗೋಡು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ಇಲ್ಲಿಗೆ ಅತೀ ಅಗತ್ಯವಿದ್ದ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಿತು.
ವಿದ್ಯುತ್ ಕಡಿತಗೊಂಡ ಸಂಧರ್ಭದಲ್ಲಿ ಇಲ್ಲಿನ ಶಾಲಾ ವಿಧ್ಯಾರ್ಥಿಗಳು ಬಾವಿಯಿಂದ ನೀರನ್ನು ಸೇದುವ ಕಷ್ಟಕರ ಸನ್ನಿವೇಶಗಳನ್ನು ಮನಗಂಡ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗು ಮುಖ್ಯಶಿಕ್ಷಕರು ಶಾಲೆಗೆ ನೀರಿನ ಟ್ಯಾಂಕ್ ಅಗತ್ಯವಿರುವುದಾಗಿ ರೋಟರಾಕ್ಟ್ ಮಾಜಿ ಅಧ್ಯಕ್ಷ ರೋ. ಚೇತನ್ ಕಜೆಗದ್ದೆಯವರ ಗಮನಕ್ಕೆ ತಂದಿದ್ದರು. ಈ ನಿಟ್ಟಿನಲ್ಲಿ ರೋಟರಾಕ್ಟ್ ಅಧ್ಯಕ್ಷ ರೋ.ಮೋಹಿತ್ ಹರ್ಲಡ್ಕ, ಕಾರ್ಯದರ್ಶಿ ರೋ.ಪ್ರಣೀತ್ ಕಣಕ್ಕೂರು, ರೋಟರಾಕ್ಟ್ ಮಾಜಿ ಅದ್ಯಕ್ಷ ಭವಾನಿಶಂಕರ ಕಲ್ಮಡ್ಕ, ರೋಟರಾಕ್ಟ್ ಮಾಜಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಕೆದಿಲಾಯ , ರೋ.ಮಧುಸೂದನ್ ಬೂಡು, ರೋಟರಾಕ್ಟ್ ಸಭಾಪತಿ ರೋ.ಪ್ರಭಾಕರ್ ನಾಯರ್, ಮಾತ್ರೃ ಸಂಸ್ಥೆ ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರೋ.ಪಿ.ಎಚ್.ಎಫ್.ಡಾ.ಪುರುಷೋತ್ತಮ ಕೆ.ಜಿ. , ಇನ್ನರ್ ವ್ಹೀಲ್ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ್ ಇವರುಗಳೊಂದಿಗೆ ಇಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಿರಿಯಡ್ಕ ಇಲ್ಲಿಗೆ ಭೇಟಿ ನೀಡಿ ನೀರಿನ ಟ್ಯಾಂಕ್ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳ ಪೋಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷ ಓಬಯ್ಯ ಕಜೆಗದ್ದೆ, ಶಾಲಾ ಮುಖ್ಯ ಶಿಕ್ಷಕ ಸುಧೀರ್.ಕೆ, ವಿಧ್ಯಾರ್ಥಿಗಳು ಹಾಗು ಶಾಲಾಭಿಮಾನಿಗಳು ಭಾಗವಹಿಸಿದ್ದರು.
ರೋಟರಿ ಕ್ಲಬ್ ಸುಳ್ಯ ಹಾಗು ರೋಟರಾಕ್ಟ್ ಕ್ಲಬ್ ಸುಳ್ಯ ಜಂಟಿಯಾಗಿ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಲು ರೋಟರಿ ಕ್ಲಬ್ ಸುಳ್ಯ ಇದರ ಮಾಜಿ ಅಧ್ಯಕ್ಷರು ರೋ.ಪಿ.ಪಿ.ಪಿ.ಎಚ್.ಎಫ್.ರಾಮಚಂದ್ರ.ಪಿ ಮಾಲಕರು ಭಾರತ್ ಆಗ್ರೋ ಹೌಸ್ ಸುಳ್ಯ ಇವರು ಉತ್ತಮ ದರ್ಜೆಯ 1000ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಕಂಪೆನಿಯ ಟ್ಯಾಂಕ್ ಅನ್ನು ಉಚಿತವಾಗಿ ನೀಡಿರುತ್ತಾರೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…