ಬಾವಿಗೆ ಬಿದ್ದ ಚಿರತೆಯ ರಕ್ಷಣೆ

June 25, 2019
10:08 PM

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror