ಬಾವಿಗೆ ಬಿದ್ದ ಚಿರತೆಯ ರಕ್ಷಣೆ

June 25, 2019
10:08 PM

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

Advertisement

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group