Advertisement
ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

Advertisement
Advertisement

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

6 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

6 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

6 hours ago