ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

Advertisement

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

1 hour ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

5 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

5 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

6 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

6 hours ago