ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.
ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.
ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…