ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.
ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.
ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…