Advertisement
ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

10 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

19 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

19 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

19 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

19 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago