ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.
ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.
ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…