Advertisement
ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

7 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

19 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

19 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago