Advertisement
ಜಿಲ್ಲೆ

ಬಾವಿಗೆ ಬಿದ್ದ ಚಿರತೆಯ ರಕ್ಷಣೆ

Share

ಬೆಳ್ತಂಗಡಿ: ನಾವೂರು ಸಮೀಪದ ಕನ್ಯಾಡಿ ಗ್ರಾಮದ ಪಾದೆ ಎಂಬಲ್ಲಿ ಮೂವತ್ತು ಅಡಿ ಆಳದ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಸಾರ್ವಜನಿಕರ ಸಹಾಯದೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಿಸಿ, ಪಿಲಿಕುಳಗೆ ಕೊಂಡೊಗಿದ್ದಾರೆ.

ಪಾದೆ ನಿವಾಸಿ ಗಂಗಯ್ಯ ಗೌಡ ಎಂಬವರ ಮನೆಯ ಮುಂಭಾಗದಲ್ಲಿರುವ ಮೂವತ್ತು ಆಡಿ ಆಳವಿರುವ ಬಾವಿಗೆ ಚಿರತೆ ಬಿದ್ದಿರುವುದು ಮಂಗಳವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ. ತಕ್ಷಣ ನಡ ಗ್ರಾಪಂ ಸದಸ್ಯ ಪ್ರವೀಣ ಎಂಬವರಿಗೆ ಪೋನಾಯಿಸಿ ಮನೆಯವರು ಮಾಹಿತಿ ನೀಡಿದ್ದಾರೆ.

ಚಿರತೆ ಬಾವಿಗೆ ಬಿದ್ದಿರುವ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆಯ ತಂದ ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಮೇಲಕ್ಕೆತ್ತುವ ಕಾರ್ಯಕ್ಕೆ ಸನ್ನದ್ಧವಾಯಿತು. ಜನವಸತಿ ಪ್ರದೇಶವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬಾವಿಯ ಮೇಲ್ಭಾಗಕ್ಕೆ ಬಲೆಯನ್ನು ಹಾಕಲಾಯಿತು. ಮಂಗಳೂರಿನಿಂದ ಬೋನ್ ತರಿಸಿ, ಬಾವಿಯ ಪಕ್ಕದಲ್ಲಿರಿಸಿ, ಏಣಿಯನ್ನು ಬಾವಿಗೆ ಇಳಿಸಲಾಯಿತು. ಏಣಿಯ ಮೂಲಕ ಬಾವಿಯಿಂದ ಮೇಲಕ್ಕೆ ಬಂದ ಚಿರತೆ ಬೋನಿನೊಳಗೆ ಬಂಧಿಯಾಯಿತು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ನೇತೃತ್ವದಲ್ಲಿ ವಲಯ ಉಪಅರಣ್ಯಾಧಿಕಾರಿ ರಾಜೇಶ್, ರವೀಂದ್ರ ಅಂಕಲಗಿ, ವಿನೋದ್, ಉಲ್ಲಾಸ್, ರವೀಂದ್ರ ನಾಯಕ್, ಅರಣ್ಯರಕ್ಷಕರಾದ ರಾಘವೇಂದ್ರ ಪ್ರಸಾದ್, ನಿರ್ಮಲ್, ಆನಂದ್ ಮೋಹಿತ್, ಸುಭಾಶ್, ವನ್ಯಜೀವಿ ವಿಭಾಗದ ವಲಯ ಉಪಅರಣ್ಯಾಧಿಕಾರಿ ಪ್ರದೀಪ್, ಅರಣ್ಯ ರಕ್ಷಕ ಅರುಣ್ ಹಾಗೂ ಸ್ಥಳೀಯರು ಸಹಕರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

8 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

10 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

21 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

21 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago