ಬಿಎಸ್ಎನ್ಎಲ್ ಉಪವಿಭಾಗೀಯ ಅಧಿಕಾರಿ ಆರ್ ಕೆ ಭಟ್ ಸೇವಾ ನಿವೃತ್ತಿ

October 31, 2019
3:04 PM

ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ  17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.

Advertisement
Advertisement
Advertisement
Advertisement

ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು  ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ  ಉಡುಪಿಯಲ್ಲಿ 6 ವರ್ಷ,  ಕೊಡಗಿನಲ್ಲಿ 5 ವರ್ಷ,  ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು.  ಈ  ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror