ಸುಳ್ಯ: ಸುಳ್ಯ ತಾಲೂಕಿನಲ್ಲಿ ಬಿ ಎಸ್ ಎನ್ ಎಲ್ ನಲ್ಲಿ 17 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿದ್ದ ರಾಮಕೃಷ್ಣ ಭಟ್ ಪಿ. ಸೇವಾ ನಿವೃತ್ತಿಯಾಗುತ್ತಿದ್ದಾರೆ.
ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಪೈರುಪುಣಿಯ ನಾರಾಯಣ ಭಟ್ಟ ಮತ್ತು ತಾಯಿ ಸರಸ್ವತಿಯವರ ಹಿರಿಯ ಪುತ್ರನಾದ ರಾಮಕೃಷ್ಣ ಭಟ್ ಅವರು ಪುತ್ತೂರು ಫಿಲೋಮಿನ ಕಾಲೇಜಿನಲ್ಲಿ ಬಿಯಸ್ಸಿ ಪದವೀಧರರಾದ ಬಳಿಕ 1983 ರಲ್ಲಿ ಅಂದಿನ ಅಂಚೆ ಮತ್ತು ತಂತಿ ಇಲಾಖೆಯಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರವಾರ ವಿಭಾಗಲ್ಲಿ ನಿಯುಕ್ತರಾದರು. ನಂತರ ಉಡುಪಿಯಲ್ಲಿ 6 ವರ್ಷ, ಕೊಡಗಿನಲ್ಲಿ 5 ವರ್ಷ, ಉಪ್ಪಿನಂಗಡಿಯಲ್ಲಿ 8 ವರ್ಷ ಮತ್ತು ಸುಳ್ಯ ತಾಲೂಕಿನಲ್ಲಿ 17 ವರ್ಷ ಬೇರೆ ಬೇರೆ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉಪವಿಭಾಗೀಯ ಅಧಿಕಾರಿಯಾಗಿ ನಿವೃತ್ತಿಯಾಗುತ್ತಿದ್ದಾರೆ. ಒಟ್ಟು ಸುಮಾರು 36 ವರ್ಷಗಳ ಕಾಲ ಟೆಲಿಕಾಂ ಸೇವೆಯಲ್ಲಿದ್ದರು. ಈ ನಡುವೆ ಕಳೆದ 10 ವರ್ಷಗಳಿಂದ ತಮ್ಮ ಬಿಡುವಿನ ಸಮಯದಲ್ಲಿ ಆರ್ಟ್ ಆಫ್ ಲಿವಿಂಗ್ ಶಿಕ್ಷಕರಾಗಿಗೂ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…